ಬಾಗಲಕೋಟೆ: ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಪದೆ ಪದೇ ಹೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು,``ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ'' ಎಂದು ಹೇಳಿದ್ದಾರೆ. ಪಕ್ಷದ ರಾಜ್ಯ ಘಟಕದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಆರಂಭವಾಗಿರುವ ಸಂದರ್ಭದಲ್ಲಿಯೇ ಅವರು ಈ ಹೇಳಿಕೆ ನೀಡಿರುವುದು ಗಮನಾರ್ಹ.
ಶುಕ್ರವಾರ ಮಾತನಾಡಿದ ಅವರು, ``ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನ ಗೆದ್ದು ವಿಧಾನಸೌಧ ಪ್ರವೇಶಿಸುವುದು ನನ್ನ ಗುರಿ. ಬಿಜೆಪಿ ಅಧಿಕಾರಕ್ಕೆ ತರುವ ಕುರಿತು ಈಗಿನಿಂದಲೇ ಹಡಗಿನಂತೆ ರಾಜ್ಯ ಸುತ್ತಿ ಪಕ್ಷ ಸಂಘಟಿಸುವೆ'' ಎಂದು ಹೇಳಿದರು.
ರಾಹುಲ್ ಕಂಡ್ರೆ ಬಿಜೆಪಿಗೆ ಭಯ ಎಂಬ ಖರ್ಗೆ ಅವರ ಮಾತಿಗೆ ತಿರುಗೇಟು ನೀಡಿದ ಬಿಎಸ್ವೈ, ರಾಹುಲ್ ಯಾವಾಗ ಏನು ಹೇಳುತ್ತಾರೋ, ಏನು ಮಾತನಾಡುತ್ತಾರೋ, ನಾಳೆ ಏನಾಗಿಬಿಡುತ್ತೋ ಎಂಬ ಭಯ ಕಾಂಗ್ರೆಸ್ಸಿನಲ್ಲಿದೆ ಎಂದರು.
ಎಫ್ಐಆರ್ ರದ್ದತಿಗೆ ಅರ್ಜಿ ಡಿ-ನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಸಿಎಜಿ ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ 12 ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Advertisement