ಆದರೆ, ನಷ್ಟಕ್ಕೆ ಕಾರಣವಾಗಿರುವವರು ಅವರೇ ಆಗಿದ್ದಾರೆ. ಈ ವಿಚಾರವನ್ನು ಹೇಳಿದ್ದಕ್ಕೆ ಅಮಾನತುಗೊಳಿಸಲಾಗಿದೆ. ಆದರೆ, ಪ್ರತಿಭಟನೆಯನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ನಮ್ಮ ನ್ಯಾಯಯುತಬೇಡಿಕೆ ಈಡೇರಿಕೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ, ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದರು. ಆಡಳಿತ ಮಂಡಳಿಯ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ನರ್ಸ್ಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಪೋಷಕರು ಕೂಡ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ದ್ದು, ಮುಂದೆ ಕಿಮ್ಸ್ ಆವರಣದಲ್ಲಿ ಕುಟುಂಬ ಸಮೇತರಾಗಿ ಪ್ರತಿಭಟನೆ ನಡೆಸುವ ಹಾಗೂ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಧರಣಿನಿರತರನ್ನು ವಜಾಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಕಿಮ್ಸ್ ಆಡಳಿತ ಮಂಡಳಿ ಹಾಗೂ ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ನರ್ಸ್ಗಳ ಮನವೊಲಿಕೆಗೆ ಹಲವು ಬಾರಿ ಪ್ರಯತ್ನ ಮಾಡಲಾಯಿತು. ಆದರೆ, ಅವರು ಮನವಿಗೆ ಸಕಾರಾತ್ಮಕಾಗಿ ಸ್ಪಂದಿಸದೆ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಮಾನವೀಯತೆ ದೃಷ್ಟಿಯಿಂದ ವೇತನ ಹೆಚ್ಚಳ ಮಾಡಲಾಗಿದೆ. ಆದರೂ, ಪ್ರತಿಭಟನೆ ಮುಂದುವರಿಸುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ವಜಾಗೊಳಿಸಲಾಗಿದೆ ಎಂದು ಹೇಳಿದರು.