ಆಸ್ಪತ್ರೆ ತಪ್ಪಿಲ್ಲ: ಈ ಮಧ್ಯೆ ಘಟನೆ ಹಿನ್ನೆಲೆಯಲ್ಲಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ದೇಶಕಿ ಡಾ.ಆಶಾ ಬೆನಕಪ್ಪ ವೈದ್ಯಕೀಯ ಶಿಕ್ಷಣ ಸಚಿವರಿಗೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದ್ದಾರೆ. ಮಗು ಗಗನಾ ಸಾವಿಗೆ ಆಸ್ಪತ್ರೆಯಾಗಲಿ, ಅಲ್ಲಿನ ವೈದ್ಯರಾಗಲಿ ಯಾವುದೇ ರೀತಿಯಲ್ಲೂ ಕಾರಣವಲ್ಲ. ಬದಲಾಗಿ ಮಗು 2ನೇ ಮಹಡಿಯಿಂದ ಬಿದ್ದು ಮೆದುಳಿನಲ್ಲಿ ತೀವ್ರ ರಕ್ತ ಸ್ರಾವವಾಗಿದ್ದೇ ಕಾರಣ ಎಂದು ಹೇಳಿದ್ದಾರೆ.