ಬೆಂಗಳೂರಿನಲ್ಲಿ ಹಾಡುಹಗಲೇ ಉದ್ಯಮಿಯಿಂದ ರು. 15 ಲಕ್ಷ ಲೂಟಿ

ಹಾಡುಹಗಲೇ ಸಿನಿಮಿಯ ರೀತಿಯಲ್ಲಿ ಉದ್ಯಮಿಯೊಬ್ಬರಿಂದ ದುಷ್ಕರ್ಮಿಗಳು 15 ಲಕ್ಷ ರುಪಾಯಿ ನಗದು ದೋಚಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹಾಡುಹಗಲೇ ಸಿನಿಮಿಯ ರೀತಿಯಲ್ಲಿ ಉದ್ಯಮಿಯೊಬ್ಬರಿಂದ ದುಷ್ಕರ್ಮಿಗಳು 15 ಲಕ್ಷ ರುಪಾಯಿ ನಗದು ದೋಚಿ ಪರಾರಿಯಾಗಿರುವ ಘಟನೆ ಬುಧವಾರ ನಗರದ ಸೀತಾ ಸರ್ಕಲ್‌ನಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಉದ್ಯಮಿ ಬಾಲಯ್ಯ ಎಂಬುವವರು ಸೀತಾ ಸರ್ಕಲ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ 15 ಲಕ್ಷ ರುಪಾಯಿ ಡ್ರಾ ಮಾಡಿಕೊಂಡು ಹೊರಗೆ ಬಂದಾಗ ಅವರ ಕಾರ್ ಪಂಚರ್ ಆಗಿತ್ತು. ಹಣವಿದ್ದ ಬ್ಯಾಗನ್ನು ಕಾರಿನಲ್ಲಿಟ್ಟು ಟಯರ್ ಪಂಚರನ್ನು ಪರೀಕ್ಷಿಸುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಕಾರ್‌ನಲ್ಲಿದ್ದ 15 ಲಕ್ಷ ರುಪಾಯಿ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾರೆ.

ಬಾಲಯ್ಯ ಬ್ಯಾಂಕಿನಲ್ಲಿ ಹಣ ಡ್ರಾ ಮಾಡುವುದನ್ನು ಗಮನಿಸಿದ್ದ ದುಷ್ಕರ್ಮಿಗಳು ಅವರ ಕಾರನ್ನು ಪುಂಚರ್ ಮಾಡಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com