ಬಿಬಿಎಂಪಿ: ಸೋಲಿಸಿದವರಿಗೆ ನೋಟಿಸ್ ಜಾರಿ

ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿ.ರಮೇಶ್, ಮಾಜಿ ಸಚಿವ ಎಲ್. ಆರ್.ಶಿವರಾಮೇಗೌಡ ಸೇರಿದಂತೆ 20 ಮಂದಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ನೋಟಿಸ್ ಜಾರಿ ಮಾಡಿದೆ...
ಮಾಜಿ ಸಚಿವ ಎಲ್. ಆರ್.ಶಿವರಾಮೇಗೌಡ (ಸಂಗ್ರಹ ಚಿತ್ರ)
ಮಾಜಿ ಸಚಿವ ಎಲ್. ಆರ್.ಶಿವರಾಮೇಗೌಡ (ಸಂಗ್ರಹ ಚಿತ್ರ)

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿ.ರಮೇಶ್, ಮಾಜಿ ಸಚಿವ ಎಲ್. ಆರ್.ಶಿವರಾಮೇಗೌಡ ಸೇರಿದಂತೆ 20 ಮಂದಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ನೋಟಿಸ್ ಜಾರಿ ಮಾಡಿದೆ.

ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಗೊಳಿಸಲಾಗಿದ್ದು, ಆರೋಪ ಸಂಬಂಧ ಕಾರಣ ನೀಡುವಂತೆ ಸೂಚನೆ ನೀಡಲಾಗಿದೆ. ಪಿ.ರಮೇಶ್ ಅವರು ತಮ್ಮ ಸೋಲಿಗೆ ಕಾರಣರಾಗಿದ್ದಾರೆ ಎಂದು ಇಂದಿರಾನಗರ ವೆಂಕಟೇಶ್ ಎಂಬುವರು ಕೆಪಿಸಿಸಿಗೆ ದೂರು ನೀಡಿದ್ದರು. ಅದೇ ರೀತಿ ಮುನಿರಾಜು ಎಂಬುವರು ನನ್ನ ಸೋಲಿಗೆ ಕಾರಣರಾಗಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಅಭ್ಯರ್ಥಿ ಮಂಜುಳಾ ನಾಯ್ಡು ಅವರು ದೂರು ನೀಡಿದ್ದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಎಲ್.ಆರ್. ಶಿವರಾಮೇಗೌಡ ಹಾಗೂ ಅವರ ಪುತ್ರ ಚೇತನ ಗೌಡ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಮುಖ ಮುಖಂಡರು ಸೇರಿದಂತೆ 20 ಜನರ ವಿರುದ್ಧ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com