ಬೆಂಗಳೂರು: ಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಅಕ್ರಮಗಳನ್ನು ಸಿಐಡಿಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ ಮರುದಿನವೇ ರಶ್ಮಿ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನಿಯೋಜಿಸಲಾಗಿದ್ದು, ಇದರೊಂದಿಗೆ ಅಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡಲಾಗಿದೆ.
ಇದೇ ವೇಳೆ ಕೆಪಿಎಲ್ಸಿಯ ನಿರ್ದೇಶಕರಾಗಿದ್ದ ಸುಬೋಧ್ ಯಾದವ್ ಅವರನ್ನೂ ಬಿಬಿಎಂಪಿಗೇ ವರ್ಗಾವಣೆ ಮಾಡಲಾಗಿದ್ದು, ಘನತ್ಯಾಜ್ಯ ನಿರ್ವಹಣಾ ವಿಭಾಗದ ವಿಶೇಷ ಆಯುಕ್ತರನ್ನಾಗಿ
ನಿಯೋಜನೆ ಮಾಡಲಾಗಿದೆ. ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.
Advertisement