ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಗುಣ ಮಟ್ಟದ ವಿದ್ಯುತ್ ಜತೆಗೆ ನೀರು ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಜಯರಾಮು ಒತ್ತಾಯಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 100 ಬೃಹತ್ ದೊಡ್ಡ ಕೈಗಾರಿಕೆಗಳಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ತೆರಿಗೆ ಪಾವತಿಯಾಗುತ್ತಿದೆ. ಕೇಂದ್ರ ಅಬಕಾರಿ ಮತ್ತು ಸುಂಕ ರೂಪದಲ್ಲಿ ರು.2600 ಕೋಟಿ, ಕಾರ್ಪೊರೇಟ್ ತೆರಿಗೆ ರೂಪದಲ್ಲಿ ರು.250 ಕೋಟಿ ಹಾಗೂ ರು.1400 ಕೋಟಿ ವಾಣಿಜ್ಯ ತೆರಿಗೆ ಸರ್ಕಾರಕ್ಕೆ ಹೋಗುತ್ತಿದೆ. ಆದರೆ,ಪ್ರಮುಖ ಆದಾಯದ ಮೂಲವಾಗಿರುವ ಈ ಕೈಗಾರಿಕಾ ಪ್ರದೇಶದಲ್ಲಿ ಹಲವು ಸಮಸ್ಯೆಗಳು ಕಾಡುತ್ತಿದ್ದರೂ, ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯವಾಗಿ ವಿದ್ಯುತ್ ಸಮಸ್ಯೆಯಿಂದ ಈ ಭಾಗದ ಕೈಗಾರಿಕೆಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ತಾಜ್ಯ ವಿಲೇವಾರಿ ಆಗುತ್ತಿಲ್ಲ. ಗುಂಡಿ ಬಿದ್ದ ರಸ್ತೆಗಳಿಂದ ಆಗಾಗ್ಗೆ ಅಪಘಾತ, ಸೂಕ್ತ ಒಳಚರಂಡಿ ಇಲ್ಲದಿರುವುದು, ಟೌನ್ಷಿಪ್ ಮಂಜೂರಾಗದಿರುವುದು ಸೇರಿದಂತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಆದರೂ ಸರ್ಕಾರ ಇಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗ ಣಿಸಿಲ್ಲ. ಇನ್ನಾದರೂ ಈ ಬಗ್ಗೆ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸಲಾ ಗುವುದು ಎಂದು ಎಚ್ಚರಿಸಿದರು. ಸಂಘದ ಉಪಾಧ್ಯಕ್ಷ ಆರ್. ಕೃಷ್ಣಮೂರ್ತಿ, ಕಾರ್ಯದರ್ಶಿ ಎಂ. ಎಂ.ಗಿರಿ, ಜಂಟಿ ಕಾರ್ಯದರ್ಶಿ ಎಚ್.ಎಂ.ಅರೀಫ್ ಇತರರು ಹಾಜರಿದ್ದರು.
Advertisement