ಕನ್ನಡ ಬಾವುಟಕ್ಕೆ ಅಪಮಾನ ಮಾಡಿದ ಚಪ್ಪಲಿ ಶೋ ರೂಂ ಧ್ವಂಸ

ಬಾಟಾ ಶೋ ರೂಂವೊಂದರಲ್ಲಿ ಕನ್ನಡ ಬಾವುಟಕ್ಕೆ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶಗೊಂಡ ಕರ್ನಾಟಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಬಾಟಾ ಶೋ ರೂಂವೊಂದರಲ್ಲಿ ಕನ್ನಡ ಬಾವುಟಕ್ಕೆ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶಗೊಂಡ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಕಾರ್ಯಕರ್ತರು ಶೋ ರೂಂಗೆ ನುಗ್ಗಿ ಅಲ್ಲಿರುವ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ಮೈಸೂರಿನಲ್ಲಿ ಬುಧವಾರ ನಡೆದಿದೆ.

ಮೈಸೂರಿನ ಬಸ್ ನಿಲ್ದಾಣದ ಸಮೀಪದ ಬಾಟಾ ಶೋ ರೂಂನಲ್ಲಿ ಚಪ್ಪಲಿ ಕೆಳಗೆ ಕನ್ನಡ ಬಾವುಟ ಇಟ್ಟಿ0ರುವುದನ್ನು ಗಮನಿಸಿದ ಕರವೇ ಕಾರ್ಯಕರ್ತರು ಆಕ್ರೋಶಗೊಂಡು ಶೋ ರೂಂಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಧ್ವಂಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಕ್ಕಿದ್ದೇ ಚಾನ್ಸು ಅಂದುಕೊಂಡು ಗಲಾಟೆ ಮಧ್ಯೆ ಸಾರ್ವಜನಿಕರು ಚಪ್ಪಲಿಗಳನ್ನು ಎಗರಿಸಿಕೊಂಡು ಹೋಗಿದ್ದಾರೆ. ನಜರ್ ಬಾದ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com