2 ದಿನಗಳ ಹಿಂದೆ ಕೆಲಸಕ್ಕೆ ಸೇರಿದ್ರು, 3ನೇ ದಿನ ಚಿನ್ನ ಕದ್ದರು

ಎರಡು ದಿನಗಳ ಹಿಂದೆ ಕೆಲಸಕ್ಕೆ ಸೇರಿ, ಮೂರನೇ ದಿನ ಚಿನ್ನ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಖದೀಮರು...
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
ಬೆಂಗಳೂರು: ಎರಡು ದಿನಗಳ ಹಿಂದೆ ಕೆಲಸಕ್ಕೆ ಸೇರಿ, ಮೂರನೇ ದಿನ ಚಿನ್ನ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ನಗರ್ತಪೇಟೆಯ ಲಕ್ಷ್ಮೀಚೈನ್ ಶಾಪ್ ನಲ್ಲಿ ಕೆಲಸಕ್ಕೆ ಇದ್ದ ಇಬ್ಬರು ಯುವಕರು 400 ಗ್ರಾಂ ಚಿನ್ನ ಕದ್ದು ಪರಾರಿಯಾಗುತ್ತಿದ್ದ ವೇಳೆ ಹಲಸೂರು ಗೇಟ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಮಸ್ತಾನ್ ಸಿಂಗ್ ಮತ್ತು ರಮೇಶ್ ಸಿಂಗ್ ಬಂಧಿತ ಆರೋಪಿಗಳು. ಇವರು ಜ್ಯುವೆಲರಿ ಶಾಪ್ ಮಾಲೀಕನ ದೂರ ಸಂಬಂಧಿಗಳಾಗಿದ್ದರಿಂದ ಯಾವುದೇ ದಾಖಲೆ ಪಡೆಯದೇ ಕೆಲಸ ನೀಡಿದ್ದರು.
ಕಳ್ಳತನ ಮಾಡಿ ರೈಲಿನ ಮೂಲಕ ರಾಜಸ್ಥಾನಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಇಂದು ಬೆಳಿಗ್ಗೆ ಹಲಸೂರು ಗೇಟ್ ಪೊಲೀಸರು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com