ಇಂದಿನ ಯುಗವೇ ಸ್ಪರ್ಧಾತ್ಮಕ : ಬಯೋಕಾನ್ ಸಿಇಒ ಕಿರಣ್ ಮಜುಂದಾರ್ ಷಾ

ಇದು ಸಂಘರ್ಷದ ಕಾಲವಾಗಿದ್ದು, ನಾವು ಮಾಡುವ ಯಾವುದೇ ಕೆಲಸದಲ್ಲೂ ಸಂಘರ್ಷ ಎದುರಿಸುತ್ತಿರುವ ಅನುಭವವಾಗುತ್ತಿದೆ....
ಕಿರಣ್ ಮಜುಂದಾರ್ ಷಾ
ಕಿರಣ್ ಮಜುಂದಾರ್ ಷಾ
Updated on

ಬೆಂಗಳೂರು: ಇದು ಸಂಘರ್ಷದ ಕಾಲವಾಗಿದ್ದು, ನಾವು ಮಾಡುವ ಯಾವುದೇ ಕೆಲಸದಲ್ಲೂ ಸಂಘರ್ಷ ಎದುರಿಸುತ್ತಿರುವ ಅನುಭವವಾಗುತ್ತಿದೆ ಎಂದು ಬಯೋಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಮಜುಂದಾರ್ ಷಾ ಅಭಿಪ್ರಾಯಪಟ್ಟರು. ಮೌಂಟ್  ಕಾರ್ಮೆಲ್ ಕಾಲೇಜಿನಲ್ಲಿ ಗುರುವಾರ ನಡೆದ ಹರಿ ಪರಮೇಶ್ವರ್ ರಚನೆಯ `ದಿ ಪಿಲ್ಲರ್ ಇನ್ವಿಸಿಬಲ್' ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ``ನಾಗರಿಕರ ಬದ್ಧತೆ ಮತ್ತು ಸಕ್ರಿಯತೆ ಹೇಗಿರಬೇಕೆಂಬುದರಲ್ಲಿ ಸಂಘರ್ಷ ಏರ್ಪಡುತ್ತಿದೆ.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಂದೇ ಸಮನೆ ಓಡುತ್ತಿರುವ ಜನ ಜೀವನದಿಂದಾಗಿ ಸಂಘರ್ಷ ಏರ್ಪಟ್ಟಿರಬಹುದೆ ಎಂಬ ಸಂದೇಹ ಬರುತ್ತದೆ. ಸಮಾಜ ನಿರ್ಮಾಣದಲ್ಲಿ ಸಂವೇದನಶೀಲತೆಯನ್ನು ತರುವುದೇ ಸವಾಲಾಗುತ್ತಿದೆ ಎಂದರು. ``ಈ ಸಮಾಜವನ್ನು ನಾವೇ ಬದಲಾಯಿಸಲು ಸಾಧ್ಯವೇ ಎಂಬ ಪ್ರಶ್ನೆ ಎದುರಾದರೂ, ನಮ್ಮ ವ್ಯಾಪ್ತಿಯಲ್ಲಿ ಸಾಧ್ಯವಾಗುವ ಕೆಲಸಗಳನ್ನಾದರೂ ಮಾಡಬೇಕು. ಉತ್ತಮ ಸಮಾಜದ ಕಲ್ಪನೆಗೆ ಬೆಂಗಳೂರು ನಗರ ಉದಾಹರಣೆಯಾಗಿ ಕಾಣಿಸುತ್ತಿದೆ. ಅದರ ಕುರುಹುಗಳನ್ನು ನಾನಿಲ್ಲಿ ಕಾಣುತ್ತಿದ್ದೇನೆ. ಈ ನಗರದ ಬೆಳವಣಿಗೆಗೆ ನನ್ನದೊಂದು ಕೊಡುಗೆ ಇರಲೇಬೇಕೆಂಬ ಆಸೆ ಚಿಗುರೊಡೆಯುತ್ತದೆ. ಹರಿ ರಚಿಸಿರುವ, `ರೂಮರ್ ಬುಕ್ಸ್ ಇಂಡಿಯಾ' ಪ್ರಕಾಶನದ `ದಿ ಪಿಲ್ಲರ್ ಇನ್ವಿಸಿಬಲ್' ಕೃತಿಯು ಇಂಥ ಸಾಧ್ಯತೆಗಳನ್ನು ಹುಟ್ಟುಹಾಕಿದೆ ಎಂದು ಶ್ಲಾಘಿಸಿದರು.

ಉದ್ಯಮಿ ಟಿ.ವಿ. ಮೋಹನ್‍ದಾಸ್ ಪೈ, ನಿವೃತ್ತ ಐಎಎಸ್ ಅಧಿಕಾರಿ ಎ. ರವೀಂದ್ರ,  ನಾಯರ್, ರೇವತಿ ಅಶೋಕ್, ಕೃತಿಯ ಕರ್ತೃ ಹರಿ ಪರಮೇಶ್ವರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com