ಬೆಂಗಳೂರು: ಅಪಘಾತದಲ್ಲಿ ಪಾದಾಚಾರಿ ಸಾವು

ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಮಾಲಾ(42) ಎಂದು ಗುರುತಿಸಲಾಗಿದೆ.

ಈ ಸಂಬಂಧ ಮಡಿವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಅಮಲಿನಲ್ಲಿ ಪಾದಚಾರಿ ಮಹಿಳೆ ಮೇಲೆ ಕಾರು ಹರಿಸಿ ಪರಾರಿಯಾಗಿದ್ದ ಚಾಲಕ ಬಲ್ಜಿತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com