ವೇಗವಾಗಿ ಬಂದ ಕಾರಿಗೆ ಇಬ್ಬರು ಬಲಿ

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಮ್ಮಹಳ್ಳಿಯ ಮುಖ್ಯರಸ್ತೆಯಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಮ್ಮಹಳ್ಳಿಯ ಮುಖ್ಯರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಯ್ಯಪ್ಪ (48) ಹಾಗೂ ಮಾಲಾ (40) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಕಂಠಪೂರ್ತಿ ಕುಡಿದಿದ್ದ ವಿಪ್ರೋ ಕಂಪನಿಯ ಮ್ಯಾನೇಜರ್ ಬಲ್ಜಿತ್ ಸಿಂಗ್ ಅವರು ಈ ಇಬ್ಬರಿಗೆ ಡಿಕ್ಕಿ ಹೊಡಿದಿದ್ದಾರೆ. ಕಾರು ಹರಿದ ರಭಸಕ್ಕೆ ಮಾಲಾ ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕ್ಕಯ್ಯಪ್ಪ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. 
ಇವರಿಬ್ಬರೂ ಚರ್ಚನಲ್ಲಿ ಅಸೆಂಬ್ಲಿ ಇದ್ದರಿಂದ ರಾತ್ರಿ 12.40ರವರೆಗೆ ಅಲ್ಲಿಯೇ ಇದ್ದು ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಪೊಲೀಸರು ಬಲ್ಜಿತ್ ಸಿಂಗ್ ನನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com