ಭೂಸ್ವಾಧೀನದಿಂದ ಕೈಬಿಡಲು ಹೈ ಕೋರ್ಟ್ ಆದೇಶ

ಹೆಸರಘಟ್ಟ ಹೋಬಳಿಯಲ್ಲಿ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಿಸುವುದಾಗಿ ಬಿಡಿಎ ಹೊರಡಿಸಿದ್ದ ಪ್ರಾಥಮಿಕ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು:  ಹೆಸರಘಟ್ಟ ಹೋಬಳಿಯಲ್ಲಿ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಿಸುವುದಾಗಿ ಬಿಡಿಎ ಹೊರಡಿಸಿದ್ದ ಪ್ರಾಥಮಿಕ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರ ಭೂಮಿಯನ್ನು ಅಧಿಸೂಚನೆಯಿಂದ ಕೈಬಿಡುವಂತೆ ಹೈಕೋರ್ಟ್ ಆದೇಶಿಸಿದೆ. ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆಂದು ಬಿಡಿಎ 2008ರ ಡಿ.30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು.

ನಿಗದಿತ ಸಮಯದಲ್ಲಿ ಅಂತಿಮ ಸೂಚನೆ ಹೊರಡಿಸಲು ಬಿಡಿಎ ವಿಫಲವಾಗಿದ್ದು, ಅಧಿಸೂಚನೆ ರದ್ದುಪಡಿಸ ಬೇಕು ಎಂದು ಕೋರಿ ಡಾ. ಕೆ.ಬಲರಾಮನ್ ಸೇರಿ 15 ಕ್ಕೂ ಹೆಚ್ಚು ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಅರ್ಜಿದಾರರಿಗೆ ಸಂಬಂಧಿಸಿದ ಭೂಮಿ ಅಧಿಸೂಚನೆಯಿಂದ ರದ್ದುಪಡಿಸಿ ಆದೇಶಿಸಿದೆ. 2008ರಲ್ಲಿ ಬಿಡಿಎ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಿಸುವುದಾಗಿ 3,546 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳುವುದಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com