ರಾಘವೇಶ್ವರ ಶ್ರೀಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮತ್ತೊಬ್ಬ ಮಹಿಳೆ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ...
ರಾಘವೇಶ್ವರ ಶ್ರೀ
ರಾಘವೇಶ್ವರ ಶ್ರೀ
ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮತ್ತೊಬ್ಬ ಮಹಿಳೆ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಶುಕ್ರವಾರ 52ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 
ಪ್ರಕರಣದ ಕುರಿತಂತೆ ರಾಘವೇಶ್ವರ ಶ್ರೀಗಳಿಗೆ ಜಾಮೀನು ನೀಡಬೇಕು ಎಂದು ಶ್ರೀ ಪರ ವಕೀಲರು ವಾದ ಮಂಡಿಸಿದ್ದರು. ಎರಡು ಕಡೆಯವರ ವಾದ, ಪ್ರತಿವಾದ ಆಲಿಸಿದ ಸೆಷನ್ಸ್ ನ್ಯಾಯಾಧೀಶರಾದ ಜಿಡಿ ಮಹವರ್ಕರ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. 
ರಾಘವೇಶ್ವರ ಶ್ರೀಗಳಿಗೆ 30 ದಿನಗಳ ಮಧ್ಯಂತರ ನಿರೀಕ್ಷಣಾ ಜಾಮೀನು ಸೆಷನ್ಸ್ ಕೋರ್ಟ್ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com