ಕಲ್ಬುರ್ಗಿ ಹಂತಕರ ಸುಳಿವು ನೀಡಿದರೆ 5 ಲಕ್ಷ ಬಹುಮಾನ

ಹಿರಿಯ ಸಂಶೋಧಕ ಹಾಗೂ ಖ್ಯಾತ ಸಾಹಿತಿ ಎಂ.ಎಂ. ಕಲಬುರಗಿ ಹತ್ಯೆಗೆ ಸಂಬಂಧಿಸಿದಂತೆ ಹಂತಕರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಹಿರಿಯ ಸಂಶೋಧಕ ಹಾಗೂ ಖ್ಯಾತ ಸಾಹಿತಿ ಎಂ.ಎಂ. ಕಲಬುರಗಿ ಹತ್ಯೆಗೆ ಸಂಬಂಧಿಸಿದಂತೆ ಹಂತಕರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ  ಕೃಷ್ಣಾದಲ್ಲಿ ನಡೆದ ಜನತಾ ದರ್ಶನ ವೇಳೆ, ತಮ್ಮನ್ನು ಭೇಟಿ ಮಾಡಿದ ಸ್ವಾಮೀಜಿಗಳು ಹಾಗೂ ಕವಿಗಳ ಸಮೂಹಕ್ಕೆ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿದರು. ಕಲ್ಬುರ್ಗಿ ಅವರ ಹತ್ಯೆಯಾಗಿ 15 ದಿನಗಳಾದರೂ ಇದುವರೆಗೂ ಹಂತಕರ ಪತ್ತೆಯಾಗದ ಹಿನ್ನೆಲೆಯಲ್ಲಿ, ಇಂದು ಪ್ರಗತಿ ಪರ ಚಿಂತಕರು ಹಾಗೂ ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಶೋಧಕ ಡಾ. ಕಲ್ಬುರ್ಗಿ ಅವರ ಹತ್ಯೆ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ಇನಾಮು ಕೊಡುವುದಾಗಿ ತಿಳಿಸಿದ ಅವರು ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡುವುದಾಗಿ ಹೇಳಿದರು.ಪ್ರಕರಣ ಸಂಬಂಧ ಸಿಐಡಿ ಹಾಗೂ ಪೊಲೀಸರ ತನಿಖೆ ಮುಂದುವರಿದಿದ್ದು ಇದುವರೆಗೂ ಯಾವುದೇ ಗಮನಾರ್ಹ ಮಾಹಿತಿ ತಿಳಿದು ಬಂದಿಲ್ಲ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com