ಟಾಟಾ ಏಸ್ - ಟ್ಯಾಂಕರ್ ಡಿಕ್ಕಿ: 14 ಮಂದಿ ದುರ್ಮರಣ

ಟಾಟಾ ಎಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟಾಟಾ ಏಸ್ ನಲ್ಲಿದ್ದ 14 ಮಂದಿ ಸಾವನ್ನಪ್ಪಿರುವ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಾಗಲಕೋಟೆ: ಟಾಟಾ ಎಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟಾಟಾ ಏಸ್ ನಲ್ಲಿದ್ದ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ.

ಮೃತರಲ್ಲಿ 10 ಪುರುಷರು 4 ಮಹಿಳೆಯರು ಸೇರಿದ್ದಾರೆ. 8ಮ0ದಿ ಸ್ಥಳದಲ್ಲೇ ಮೃತಪಟ್ಟರೆ ಉಳಿದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.  ಅವರನ್ನು ಲೋಕಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲಾ ಮುಧೋಳ ತಾಲೂಕಿನ ಸುತ್ತಮುತ್ತಲ ಗ್ರಾಮದವರು ಎನ್ನಲಾಗಿದೆ. ಮುಧೋಳದಲ್ಲಿ ಸಂತೆಗೆಂದು ಬಂದಿದ್ದ ಅವರು ಸಂತೆ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಮುಧೋಳ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com