ದಸರಾ ಉದ್ಘಾಟನೆಗೆ ಕಡಿದಾಳ್ ನಿರಾಕರಣೆ

ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ...
ಕಡಿದಾಳ್ ಶಾಮಣ್ಣ
ಕಡಿದಾಳ್ ಶಾಮಣ್ಣ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ ನಿರಾಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದರು.

 ಭೀಕರ ಬರದ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಬೇಕು, ¨ಜತೆಗೆ ಪ್ರಗತಿಪರ ರೈತರಿಂದ ದಸರಾ ಉದ್ಘಾಟಿಸಬೇಕು ಎಂದು ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನೇತೃತ್ವದ
ದಸರಾ ಸಮಿತಿ ನಿರ್ಧರಿಸಿತ್ತು.

ಎಲ್ಲೆಡೆ ಬರ ಪರಿಸ್ಥಿತಿ ಇದೆ. ರೈತರ ಆತ್ಮಹತ್ಯೆಗಳು ನಡೆಯುತ್ತಿವೆ. ಕಳಸಾ ಬಂಡೂರಿ ಯೋಜನೆಗಾಗಿ ಹೋರಾಟ ನಡೆಯುತ್ತಿದೆ.ಇಂತಹ ಸಂದರ್ಭದಲ್ಲಿ ಮೈಸೂರಿಗೆ ಹೋಗಿ ಉತ್ಸವ ಉದ್ಘಾಟನೆ ಮಾಡೋದು ಸೂಕ್ಷ್ಮ ವಿಚಾರ. ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ, ಈ ಕಾರಣಗಳಿಂದ ಆಹ್ವಾನ ಒಪ್ಪಿಕೊಳ್ಳುವುದಿಲ್ಲ ಎಂದು ಶಾಮಣ್ಣ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com