ಅಪಘಾತಕ್ಕೊಳಗಾದ ಕಾರು
ಅಪಘಾತಕ್ಕೊಳಗಾದ ಕಾರು

ಧಾರವಾಡ ಕೃಷಿ ವಿವಿ ಬಳಿ ಭೀಕರ ಅಪಘಾತ, ಐವರು ಸಾವು

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ಬುಧವಾರ ಖಾಸಗಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು...
Published on

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ಬುಧವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರನ್ನು ಅವಿನಾಶ್‌ಚಿಂಚೋರೆ(30), ಶಿವಾನಂದಡಂಬಳ್(30), ಶಿವಾನಂದಮುತ್ತಗಿ(28) ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಜ್ವಲ್ ಹಾಗೂ ಗೋವಿಂದ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ಸೇರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com