ಭಗವಾನ್ ವಿರುದ್ಧ ದೂರು

ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ...
ಕೆಎಸ್ ಭಗವಾನ್
ಕೆಎಸ್ ಭಗವಾನ್
Updated on

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ ಬೆಂಗಳೂರು ನಗರ ಸಮಿತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಗುರುವಾರ ದೂರು ನೀಡಿದೆ.

ಸಮಿತಿ ಸದಸ್ಯರು ಠಾಣೆಗೆ ಆಗಮಿಸಿ ಪ್ರೊ.ಭಗವಾನ್ ರ ವಿರುದ್ಧ ದೂರು ನೀಡಿ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದರು. ಈಗಾಗಲೇ ಪ್ರಕರಣ ದಾಖಲಾಗಿರುವ ಕಾರಣ ಮತ್ತೊಮ್ಮೆ ಎಫ್ ಐಆಱ್ ದಾಖಲಿಸುವ ಅಗತ್ಯವಿಲ್ಲ.

ಅದರೊಂದಿಗೆ ಈ ಪ್ರಕರಣವನ್ನು ಸೇರಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದೆ,'' ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿ ದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com