ಕಾರ್ತಿಕ್ ಗೌಡ -ಮೈತ್ರಿಯಾ ಪ್ರಕರಣ: ಚಾರ್ಜ್‍ಶೀಟ್‍ಗೆ ಕೋರ್ಟ್ ತಡೆ

ನಟಿ ಮೈತ್ರಿಯಾ ಗೌಡಗೆ ವಂಚನೆ ಆರೋಪ ಸಂಬಂಧ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಮಗ ಕಾರ್ತಿಕ್ ಗೌಡ ವಿರುದ್ಧ...
ಕಾರ್ತಿಕ್ ಗೌಡ
ಕಾರ್ತಿಕ್ ಗೌಡ

ಬೆಂಗಳೂರು: ನಟಿ ಮೈತ್ರಿಯಾ ಗೌಡಗೆ ವಂಚನೆ ಆರೋಪ ಸಂಬಂಧ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಮಗ ಕಾರ್ತಿಕ್ ಗೌಡ ವಿರುದ್ಧ ಆರ್.ಟಿ. ನಗರ ಪೊಲೀಸರು ದಾಖಲಿಸಿದ್ದ ದೋಷಾರೋಪಪಟ್ಟಿ ಮತ್ತು ನಗರದ 8ನೇ ಎಸಿಎಂಎಂ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಗೆ ಹೈಕೋರ್ಟ್ ಬುಧವಾರ ನಾಲ್ಕು ವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ದ ಅಧೀನ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದು ಕೋರಿ ಕಾರ್ತಿಕ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರಿದ್ದ ಪೀಠ ಆದೇಶ ಮಾಡಿತು. ಅರ್ಜಿ ಕುರಿತು ಆರ್.ಟಿ. ನಗರ ಪೊಲೀಸರಿಗೆ, ಮೈತ್ರಿಯಾಗೌಡಗೆ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com