ಇನ್ನು ಕನಕಪುರ ರಸ್ತೆಯಲ್ಲಿನ ಜರಗನಹಳ್ಳಿಯಲ್ಲಿರುವ ಟೆಂಪಲ್ ಟ್ರೀ ಅಪಾರ್ಟ್ ಮೆಂಟ್ ಬಳಿ ಸುಮಾರು 2.25 ಎಕರೆ ಭೂ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಗೋಪಾಲನ್ ಎಂಟರ್ ಪ್ರೈಸಸ್ ಕಂಪನಿ 2.25 ಎಕರೆ ಜಾಗದಲ್ಲಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿತ್ತು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್ , ಉಪವಿಭಾಗಧೀಕಾರಿ ಎಸಿ ನಾಗರಾಜ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ರು.200 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಮರುವಶ ಪಡೆಯಲಾಗಿದೆ.