ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಕಾರ್ಪಿಯೋದಲ್ಲಿದ್ದ ಮಾಜಿ ಕಾರ್ಪೋರೇಟರ್ ಹಾಗೂ ಆತನ ಸಹಚರರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ವಕೀಲ ಶ್ರೀನಿವಾಸ್ ಕಾರಿಗೆ ಹಾನಿಯಾಗಿದೆ. ಇದನ್ನು ಪ್ರಶ್ನಿಸಿದ ವಕೀಲನನ್ನು ರಾಜಕಾರಣಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಮತ್ತೊಬ್ಬ ವಕೀಲ ಹಾಗೂ ಇತರರು ಕೂಡಲೇ ಸ್ಥಳಕ್ಕೆ ಧಾವಿಸಿ ಶ್ರೀನಿವಾಸ್ ಅವರನ್ನು ರಕ್ಷಿಸಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳು ತಮ್ಮ ಸ್ಕಾರ್ಪಿಯೋವನ್ನು ಬಿಟ್ಟು ಪರಾರಿಯಾಗಿದ್ದಾರೆ.