ಕೈಗಾರಿಕೆಗಳ ವಿದ್ಯುತ್ ರಜೆ ವಾಪಸ್; ರಾಜ್ಕಕ್ಕೆ ಹೆಚ್ಚುವರಿ 2,050 ಮೆ.ವಾ ವಿದ್ಯುತ್

ವಿದ್ಯುತ್ ಉತ್ಪಾದನೆ ಪ್ರಮಾಣದಲ್ಲಿ ಸುಧಾರಣೆಯಾಗಿರುವ ಕಾರಣ ಈಗಾಗಲೇ ಕೈಗಾರಿಕಾ ಕ್ಷೇತ್ರಗಳಲ್ಲಿ ಘೋಷಿಸಲಾಗಿರುವ ವಿದ್ಯುತ್ ರಜೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್
ಇಂಧನ ಸಚಿವ ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ವಿದ್ಯುತ್ ಉತ್ಪಾದನೆ ಪ್ರಮಾಣದಲ್ಲಿ ಸುಧಾರಣೆಯಾಗಿರುವ ಕಾರಣ ಈಗಾಗಲೇ ಕೈಗಾರಿಕಾ ಕ್ಷೇತ್ರಗಳಲ್ಲಿ ಘೋಷಿಸಲಾಗಿರುವ ವಿದ್ಯುತ್ ರಜೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ವಿಕಾಸಸೌಧದಲ್ಲಿ ಮಾತನಾಡಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಇದೀಗ ಹೆಚ್ಚುವರಿಯಾಗಿ 2,050 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ಕೈಗಾರಿಕಾ ಕ್ಷೇತ್ರಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಬೇಸಿಗೆ ಕಾಲವನ್ನು ದೃಷ್ಟಿಯಲ್ಲಿಟ್ಟಕೊಂಡಿರುವ ಸರ್ಕಾರ ಈಗಾಗಲೇ ಜಲವಿದ್ಯುತ್ ಉತ್ಪಾದನೆ ಸೀಮಿತಿಗೊಳಿಸಿದೆ. ಬೇಸಿಗೆ ಮತ್ತು ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಗಮನದಲ್ಲಿಟ್ಟುಕೊಂಡು ಹೆಚ್ಚುವರಿ 1 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಲಿಂಗನಮಕ್ಕಿ, ಸೂಪೂ ಹಾಗೂ ಮಾಣಿ ಜಲಾಶಯಗಳಲ್ಲಿ ನೀರು ಸಂಗ್ರಹಿಸಲಾಗಿದೆ. ಕೂಡಂಕುಲಂನಲ್ಲೂ ಉತ್ಪಾದನೆ ಆರಂಭಗೊಂಡಿರುವದರಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಉಂಟಾಗಿದ್ದ ವಿದ್ಯುತ್ ಕೊರತೆಯನ್ನು ನೀಗಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com