ಜಮೀರ್ ಅಹಮ್ಮದ್ ಮೀರ್ ಸಾದಿಕ್ ವರ್ಗಕ್ಕೆ ಸೇರಿದವರಾಗಿದ್ದು, ಅಕ್ರಮವಾಗಿ ಹಣ ಸಂಪಾದಿಸಿ ಜನರನ್ನು ಮೆಕ್ಕಾಗೆ ಕಳುಹಿಸಿದರೆ ದೇವರು ಅವರನ್ನು ಕ್ಷಮಿಸುವುದಿಲ್ಲ ಎಂದು ದೇವೇಗೌಡರು ಕಿಡಿಕಾರಿದ್ದರು. ಈ ಹಿನ್ನಲೆಯಲ್ಲಿ ದೇವೇಗೌಡರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮೌಲ್ವಿಗಳು, ಗೌಡರು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.