ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ

ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌
ಹನುಮಂತಪ್ಪ ಕೊಪ್ಪದ
ಹನುಮಂತಪ್ಪ ಕೊಪ್ಪದ

ಹುಬ್ಬಳ್ಳಿ: ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌ ನೀಡಿದ್ದಾರೆ.

ದೆಹಲಿಯ ಆರ್ಮಿ ಆರ್‌ಆರ್‌‌ ಆಸ್ಪತ್ರೆಯಲ್ಲಿ ಹನುಮಂತಪ್ಪ ಕೊಪ್ಪದ ನಿಧನರಾದ ಬಳಿಕ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಕೊಪ್ಪದ ಅವರಿಗೆ ಅಂತಿಮ ನಮನ ಸಲ್ಲಿಸಿದ್ದ ಸಿಎಂ ಬಳಿಕ ಮತ್ತೊಮ್ಮೆ ಕಿಮ್ಸ್‌‌ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆದರು. ಬಳಿಕ ಕೊಪ್ಪದ ಅವರ ಕುಟುಂಬ ಸದಸ್ಯರಿಗೆ 25 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

ಚೆಕ್‌ ವಿತರಿಸಿ ಮಾತನಾಡಿದ ಅವರು, ಕೊಪ್ಪದ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಲಾಗುವುದು. ಇನ್ನಿಬ್ಬರು ಹುತಾತ್ಮ ಯೋಧರ ಕುಟುಂಬಕ್ಕೂ 25 ಲಕ್ಷ ರೂಪಾಯಿ ಮೊತ್ತದ ಚೆಕ್, 4 ಎಕರೆ ಜಮೀನು, 1 ನಿವೇಶನ, ಯೋಧರ ಪತ್ನಿಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಹನುಮಂತಪ್ಪ ಕೊಪ್ಪದ್‌ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ರಿಂದ 10 ಗಂಟೆಯವರೆಗೂ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com