ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಚಿನ್ನಾಭರಣ ಕಳವು

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು...
ಕೊಲ್ಲೂರು ಮೂಕಾಂಬಿಕಾ ದೇವಾಲಯ
ಕೊಲ್ಲೂರು ಮೂಕಾಂಬಿಕಾ ದೇವಾಲಯ
Updated on
ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು ಮಾಡಲಾಗಿದೆ.
ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಕೊಲ್ಲೂರು ಮುಕಾಂಬಿಕಾ ದೇವಾಲಯದಲ್ಲಿ ಅಲ್ಲಿನ ಸಿಬ್ಬಂದಿಯೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಸೇವಾ ಕೌಂಟರ್ ನಲ್ಲಿದ್ದ ಶಿವರಾಮ್ ಅವರು ದೇವರಿಗೆ ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕದ್ದು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 
ಆಡಳಿತಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಆಡಳಿತಾಧಿಕಾರಿ ಬೇಜವಾಬ್ದಾರಿಯಿಂದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಚಿನ್ನಾಭರಣವನ್ನು ಖಜಾನೆಯಲ್ಲಿಡದೇ, ಸೇವಾಕೌಂಟರ್ ನಲ್ಲಿ ಇಟ್ಟಿದ್ದರಿಂದ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com