ಏತನ್ಮಧ್ಯೆ, ತಮ್ಮ ಹೆಸರು ಶಿಫಾರಸುಗೊಂಡ ಬಳಿಕ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹುದ್ದೆ ಅಲಂಕರಿಸಲು ತಮಗೆ ಇಷ್ಟವಿಲ್ಲವೆಂದು ನ್ಯಾ. ವಿಕ್ರಂಜಿತ್ ಸೆನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮೂಲಗಳ ಪ್ರಕಾರ ಬುಧವಾರವೇ ಅವರು ಈ ಪತ್ರ ಬರೆದಿದ್ದಾರೆ. ಹೀಗಾಗಿ ಅಂತಿಮವಾಗಿ ಎಸ್.ಆರ್.ನಾಯಕ್ ಒಬ್ಬರದೇ ಹೆಸರು ಉಳಿದಿರುವುದರಿಂದ ಸರ್ಕಾರಕ್ಕೆ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ.