ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾನಗರ ನಿವಾಸಿ ಹರಿಣಿ (25) ಮೃತ ಮಹಿಳೆ.
ಮೂರು ವರ್ಷಗಳ ಹಿಂದೆ ಮಂಜುನಾಥ್ ಎಂಬಾತನೊಂದಿಗೆ ಹರಿಣಿ ಮದುವೆಯಾಗಿದ್ದರು. ಇದೀಗ ಈತನೇ ತಮ್ಮ ಮಗಳನ್ನುಕೊಲೆ ಮಾಡಿದ್ದಾನೆ ಎಂದು ಹರಿಣಿ ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮಂಜುನಾಥ್ ರಿಟೇಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ನಡುವೆ ಯಾವುದೇ ಕಲಹ ಇರಲಿಲ್ಲ. ಮಹಿಳೆ ಮಲಗಿದ ಸ್ಥಳದಲ್ಲೇ ಮೃತಪಟ್ಟಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಪತಿ ಮಂಜುನಾಥ್ನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.
Advertisement