ಆನೆ ತುಳಿತಕ್ಕೆ ವ್ಯಕ್ತಿ ಸಾವು

ಬೈಲೂರು ಅರಣ್ಯ ವಲಯ ಪ್ರದೇಶದ ಹೊಸಪಾಳ್ಯ ಸಮೀಪ ಶನಿವಾರ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ...
ಹನೂರಿನಲ್ಲಿ ಆನೆ ದಾಳಿ (ಸಂಗ್ರಹ ಚಿತ್ರ)
ಹನೂರಿನಲ್ಲಿ ಆನೆ ದಾಳಿ (ಸಂಗ್ರಹ ಚಿತ್ರ)

ಹನೂರು: ಬೈಲೂರು ಅರಣ್ಯ ವಲಯ ಪ್ರದೇಶದ ಹೊಸಪಾಳ್ಯ ಸಮೀಪ ಶನಿವಾರ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಬಿಆರ್‍ಟಿ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಹೊಸಪಾಳ್ಯ ಬಳಿ ಇವರು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ. ಈ ವ್ಯಕ್ತಿ ವಯಸ್ಸು ಸುಮಾರು  35 ವರ್ಷ ಎಂದು ಅಂದಾಜಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವಾಗ ಅಸುನೀಗಿದ್ದಾರೆ. ಹಲವು ದಿನಗಳಿಂದ ಹೊಸಪಾಳ್ಯ  ಸುತ್ತಮುತ್ತ ಓಡಾಡಿಕೊಂಡಿದ್ದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com