ಉನ್ನತ ಮಟ್ಟಕ್ಕೇರಲು ಬಡತನ ಪ್ರೇರಣೆ

ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು; ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದ ಕೌಶಿಕ್ ಮುದ್ದಾ ಅವರ `63 ರಿಜೆಕ್ಷನ್ಸ್' ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಉದ್ಯಮ ಆರಂಭಿಸುವಾಗ ಯುವ ಉದ್ಯಮಿಗಳು ಎದುರಿಸುವ ಸವಾಲುಗಳು ಹಾಗೂ ಅವುಗಳನ್ನು ಮೆಟ್ಟಿ ನಿಂತ ಅನುಭವಗಳನ್ನು ಪ್ರಬುದಟಛಿತೆಯಿಂದ ಲೇಖಕರು ಈ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಉಪಲೋಕಾಯುಕ್ತ ಸುಭಾಷ್ ಬಿ.ಅಡಿ ಮಾತನಾಡಿ, ಯುವಕರಿಂದ ದೇಶದ ಬೆಳವಣಿಗೆ ಸಾಧ್ಯ. ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಒಳ್ಳೆತನ ರೂಡಿsಸಿಕೊಳ್ಳಬೇಕು. ಸಾಧನೆ ಮಾಡಲು ಅನ್ಯ ಮಾರ್ಗವನ್ನು ಆಯ್ದುಕೊಳ್ಳದೆ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ನ್ಯಾಯಮೂರ್ತಿ ಎನ್. ಕೆ.ಪಾಟೀಲ್, ತರಬೇತಿ ಮತ್ತು ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಔರಾದ್ಕರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com