ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹ

ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸಚಿವರೂ ಮನವೊಲಿಸುವ ಪ್ರಯತ್ನ ಮಾಡಿಲ್ಲ ಎಂದು ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹ
ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹ
Updated on

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಕಳೆದ 9 ದಿನಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಶಿಕ್ಷಣ ಇಲಾಖೆ ಅಥವಾ ಸಚಿವರೂ ಯಾವುದೇ ಮನವೊಲಿಸುವ ಪ್ರಯತ್ನ ಮಾಡಿಲ್ಲ ಎಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ಜಾಲಮಂಗಲ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಧರಣಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಬೇಕೆಂಬ ಪ್ರಾಮಾಣಿಕ ಕಾಳಜಿ ಇದ್ದಂತಿಲ್ಲ. ಹೀಗಾಗಿಯೇ ಕಳೆದ 25ವರ್ಷಗಳಿಂದ ಸರ್ಕಾರದ ಯಾವುದೇ ಅನುದಾನವಿಲ್ಲದೇ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬರುತ್ತಿರುವ ನೂರಾರು ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು. ಸರ್ಕಾರಿ ಶಾಲಾ ಕಾಲೆಜುಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ಹಲವು ಸವಲತ್ತುಗಳನ್ನುನೀಡಿದೆ. ಅದೇ ರೀತಿ ಅನು-ದಾನ ರಹಿತ ಶಾಲಾ ಕಾಲೆಜುಗಳಲ್ಲಿ ಓದುತ್ತಿರುವ ಮಕ್ಕಳಿಗೂ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಜಯದೇವಗಾಂಧಿ ಮಾತನಾಡಿ, ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಅನುದಾನಿತ ಶಾಲಾ ಕಾಲೇಜುಗಳಿಗೆ ಆಯಾ ಕಾಲಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 95ರಿಂದ ಅನುದಾನ ನಿಲ್ಲಿಸಲಾಗಿದ್ದು ಈ ಅವಧಿಯಲ್ಲಿ 48ತಾಲೂಕುಗಳಲ್ಲಿ ಹೊಸದಾಗಿ ಕನ್ನಡ ಶಾಲಾ ಕಾಲೇಜುಗಳನ್ನು ತೆರೆಯಲಾಗಿಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com