ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿ

ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ...
ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ (ಸಂಗ್ರಹ ಚಿತ್ರ)
ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ (ಸಂಗ್ರಹ ಚಿತ್ರ)

ಬೆಂಗಳೂರು: ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ.

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯಿಂದ ಅರಮನೆ ರಸ್ತೆಯ ಶಾಂತಿಗೃಹದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ  ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಂತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ವಿವೇಕಾನಂದರು ತಮ್ಮ 39 ವರ್ಷಗಳ ಜೀವನದಲ್ಲಿ ನೂರಾರು ಭಾಷಣಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಎಲ್ಲ ಭಾಷಣಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಇತರರಿಗೆ  ವಿವರಿಸಿದ್ದಾರೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ವಿವೇಕಾನಂದರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ  ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯದರ್ಶಿ ಸಿದ್ದಯ್ಯ, ಷಣ್ಮುಖಪ್ಪ ಮತ್ತಿತರರು ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com