ಬೆಳಗಾವಿ: ಫಾರ್ಮರ್ಸ್ ಶುಗರ್ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಮತ್ತೊಂದು ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಕೆಳಗೆ ಮಲಗಿದ್ದ ಮೂವರ ಮೇಲೆ ಟ್ರ್ಯಾಕ್ಟರ್ ಉರುಳಿ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಮುರಗುಂಡಿ ಗ್ರಾಮದ ಚಂದು ಕೊಂಡವಳ್ಳಿ(30), ಬಾಳಪ್ಪ ಡೊಳ್ಳಿ(40), ನಂದು ಮಾಳಿ(30) ಎನ್ನಲಾಗಿದೆ.
ಘಟನೆ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement