ಹೆಬ್ಬಾಳ ಟಿಕೆಟ್ ಫೈಟ್; ಸಿದ್ದರಾಮಯ್ಯ-ಖರ್ಗೆ ನಡುವೆ ಪೈಪೋಟಿ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಎದ್ದಿರುವ ಭಿನ್ನಮತ ಇದೀಗ ಕಾಂಗ್ರೆಸ್ ವರಿಷ್ಠರನ್ನು ತಲುಪಿದೆ. ಒಂದೊಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ...
ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಎದ್ದಿರುವ ಭಿನ್ನಮತ ಇದೀಗ ಕಾಂಗ್ರೆಸ್ ವರಿಷ್ಠರನ್ನು ತಲುಪಿದೆ.

ಒಂದೊಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ನಿಷ್ಠಾವಂತ ಭೈರತಿ ಸುರೇಶ್ ಅವರಿಗೆ ಟಿಕೆಟ್ ಕೊಡಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದು, ಇತ್ತ ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಭೈರತಿಗೆ ಟಿಕೆಟ್ ನೀಡುವುದು ಸುತಾರಾಂ ಇಷ್ಟವಿಲ್ಲ. ಹಾಗಾಗಿ ಪಕ್ಷದ ರಾಜ್ಯದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹತ್ತಿರ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ದಿಗ್ವಿಜಯ್ ಸಿಂಗ್ ಅವರಿಗೆ ಮನವರಿಕೆ ಮಾಡಲು ಯತ್ನಿಸಿರುವ ಮಲ್ಲಿಕಾರ್ಜುನ ಖರ್ಗೆ, 2012ರ ಜೂನ್ ನಲ್ಲಿ ನಡೆದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತು ಅವಮಾನ ಅನುಭವಿಸಿದ್ದನ್ನು ಗಮನಕ್ಕೆ ತಂದರು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಅವರ ಬೆಂಬಲಿಗರ ಪ್ರೋತ್ಸಾಹದಿಂದ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುರೇಶ್ ಭೈರತಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಖರ್ಗೆಯವರ ನಿಷ್ಠಾವಂತ ಇಕ್ಬಾಲ್ ಅಹ್ಮದ್ ಸರದಗಿಯವರನ್ನು ಸೋಲಿಸಿದ್ದರು.

ಪಕ್ಷದ ಮೂಲ ಸದಸ್ಯರಲ್ಲದವರಿಗೆ ಟಿಕೆಟ್ ನೀಡುವುದರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲದೆ ಒಕ್ಕೊರಲಿನ ದನಿಯೆತ್ತಿರುವ ಮೂಲ ಕಾಂಗ್ರೆಸಿಗರು, ಹೆಬ್ಬಾಳ ಕ್ಷೇತ್ರದಿಂದ ಬೈರತಿ ಸುರೇಶ್‍ಗೆ ಟಿಕೆಟ್ ನೀಡದಂತೆ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com