ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಅಮೀನ್ ಮಟ್ಟು ವಿರುದ್ಧ ಮೊಕದ್ದಮೆ ಹೂಡಿ: ಪ್ರಹ್ಲಾದ್ ಜೋಶಿ

ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಆಗ್ರಹಿಸಿದರು....

ವಿಜಯಪುರ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನು ಮಾತ್ರ ಬಂಧಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ ಮಟ್ಟು ನೀಡಿರುವ ಹೇಳಿಕೆ ಖಂಡನೀಯ. ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೇ ಅವರ ವಿರುದ್ಧ  ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಸೋಮವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದ ವಿವಿಧೆಡೆ ಉಗ್ರರು ಆಶ್ರಯ ಪಡೆದಿದ್ದಾರೆ. ಸದ್ಯದ ಬೆಳವಣಿಗೆಗೆಳು ಇದನ್ನು ಪುಷ್ಟೀಕರಿಸುತ್ತವೆ. ಬಂಧಿತರಲ್ಲಿ ರಾಜ್ಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಆತಂಕಕಾರಿ ವಿಷಯ. ಆದರೂ ರಾಜ್ಯ ಸರ್ಕಾರ ಭಯೋತ್ಪಾದನೆ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲ’ ಎಂದು ಅವರು ಆರೋಪಿಸಿದರು.

Related Stories

No stories found.

Advertisement

X
Kannada Prabha
www.kannadaprabha.com