ಶಿಂಷಾನದಿಗೆ ಉರುಳಿದ ಕೆಎಸ್ಆರ್ಟಿಸಿ ಬಸ್: ಓರ್ವ ಸಾವು, ಹಲವರಿಗೆ ಗಾಯ

ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಶಿಂಷಾನದಿಗೆ ಉರುಳಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ...
ನದಿಗೆ ಬಿದ್ದಿ ಎಸ್ಆರ್ಟಿಸಿ ಬಸ್
ನದಿಗೆ ಬಿದ್ದಿ ಎಸ್ಆರ್ಟಿಸಿ ಬಸ್
Updated on

ಮದ್ದೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಶಿಂಷಾನದಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಬಸ್ ಮದ್ದೂರಿನ ಶಿವಪುರ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಟೈರ್ ಸ್ಫೋಟಗೊಂಡು ಬಸ್ 50 ಅಡಿ ಆಳದ ನದಿಗೆ ಉರುಳಿ ಬಿದ್ದಿದೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದಾರೆಂದು ಶಂಕಿಸಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com