ಹೆಬ್ಬಗೋಡಿ: ಮಕ್ಕಳಲ್ಲಿ ರಾಷ್ಟ್ರಪ್ರೇಮ ಮೂಡಲು, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ಅವರಿಗೆ ತಿಳಿಸುವ ಅಗತ್ಯ ಇದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅಭಿಪ್ರಾಯಪಟ್ಟರು. ಹೊಂಗಸಂದ್ರದ ಸರ್ಕಾರಿ ಶಾಲೆಯಲ್ಲಿ ನಡೆದ 67ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೊಂಗಸಂದ್ರದ ಶಿವಬಸಪ್ಪ, ಮುಂದಿನ ಕಠಿಣ ಪರಿಸ್ಥಿತಿಗಳನ್ನು ಎದುರಿಸಲು ಮಕ್ಕಳು ಸನ್ನದ್ಧರಾಗಬೇಕಿದೆ ಎಂದರು. ಹೊಂಗಸಂದ್ರ ವಾರ್ಡ್ ಬಿಬಿಎಂಪಿ ಸದಸ್ಯೆ ಸುಕಂದ, ಬಿಜೆಪಿ ಮುಖಂಡ ರಾಮಚಂದ್ರ ಮತ್ತಿತರರಿದ್ದರು.
Advertisement