ಆರ್ಟಿಒ ಕಚೇರಿ ಅಧಿಕಾರಿ ನೇಮಕಕ್ಕೆ ಆಗ್ರಹ

Updated on

ಕೋಲಾರ: ಕೆ.ಜಿ.ಎಫ್ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕಾಯಂ ಅಧಿಕಾರಿಯನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಕೋಲಾರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಾಹೀದ್ ಶಹಜಾದ್ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೆಜಿಎಫ್ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಗೆ, ಕೆಜಿಎಫ್, ಬಂಗಾರಪೇಟೆ ಹಾಗೂ ಮಾಲೂರು ತಾಲೂಕು ಒಳಪಟ್ಟಿದ್ದು, ಕಚೇರಿಯಲ್ಲಿ ಕಾಯಂ ಸಾರಿಗೆ ಅಧಿಕಾರಿ ಇಲ್ಲದಿರುವುದರಿಂದ ವಾಹನ ಮಾಲೀಕರು ಹಾಗೂ ಚಾಲಕರು ಸಕಾಲಕ್ಕೆ ಯಾವುದೇ ದಾಖಲೆ ಪಡೆಯಲು ಸುಮಾರು ತಿಂಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾರೆಡ್ಡಿ, ಕೆಜಿಎಫ್ ಪ್ರಾದೇಶಿಕ ಕಚೇರಿಯಲ್ಲಿ ಶಾಶ್ವತ ಅಧಿಕಾರಿ ಇಲ್ಲದೇ ಇರುವುದು ನನ್ನ ಗಮನಕ್ಕೆ ಬಂದಿದೆ.  ಶೀಘ್ರದಲ್ಲಿ ಅಧಿಕಾರಿಯನ್ನು ನೇಮಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com