ಜಿ. ಪರಮೇಶ್ವರ್ ಹುಟ್ಟುಹಬ್ಬ ಆಚರಣೆ

Updated on

ಮಾಲೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ 63ನೇ ಹುಟ್ಟುಹಬ್ಬದ ಅಂಗವಾಗಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ಎ. ನಾಗರಾಜ್ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಬುಧವಾರ ಹಣ್ಣು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎ.ನಾಗರಾಜ್, ಡಾ.ಜಿ. ಪರಮೇಶ್ವರ್ ಅವರು ತಮ್ಮ ಆಡಳಿತದಲ್ಲಿ ಸಾಮಾಜಿಕ ನ್ಯಾಯ ಪರಿಪಾಲಕರು.ಅವರು ಈ ಹಿಂದೆ ಉನ್ನತ್ತ ಶಿಕ್ಷಣ, ಜವಳಿ, ವಿಜ್ಞಾನ-ತಂತ್ರಜ್ಞಾನ ಮತ್ತಿತರ ಖಾತೆಗಳ ಸಚಿವರಾಗಿ ಯಶ್ವಸಿಯಾಗಿ ನಿಭಾಯಿಸಿದ್ದು, ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದರು. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆಶೋಕ್ ಕುಮಾರ್, ಜಮೀರ್ ಪಾಷ, ಸಾದಿಕ್, ಡಿ.ಟಿ. ಮಂಜುನಾಥ್, ಆರಾಧನಾ ವೇಣು, ಸಂಪಂಗಿ, ಹರಿ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com