ನಿರ್ದಿಷ್ಟ ಸ್ಥಳದಲ್ಲಿ ಗಣೇಶ ಮಾರಾಟ ಮಾಡಿ

Updated on

ಮಂಡ್ಯ: ನಗರಸಭಾ ವ್ಯಾಪ್ತಿಯಲ್ಲಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ನಿರ್ದಿಷ್ಟ ಸ್ಥಳಗಳಲ್ಲಿ ಮಾರಾಟ ಮಾಡುವಂತೆ ಸೂಚಿಸಲಾಗಿದೆ. ಆಗಸ್ಟ್ 28 ಮತ್ತು 29ರಂದು ಗೌರಿ, ಗಣೇಶ ಆಚರಣೆ ಪ್ರಯುಕ್ತ, ಗೌರಿ, ಗಣೇಶ ಮೂರ್ತಿಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಹಾಗೂ ನಗರಸಭೆಯಿಂದ ಕೆಲವು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಂತೆ ಮಾಳ, ಕಲಾಮಂದಿರದ ಹಿಂಭಾಗ, ಗುತ್ತಲು ಮಾರುತಿ ನಗರ ಆಟೋ ಸ್ಟ್ಯಾಂಡ್ ಬಳಿ ಹಾಗೂ ಸ್ವರ್ಣಸಂದ್ರ ಆಟೋ ನಿಲ್ದಾಣದ ಬಳಿ ಇರುವ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವುದು. ತಪ್ಪಿದಲ್ಲಿ ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com