ರೈತರಿಗೆ ಸಹಾಯ ಯೋಜನೆಗೆ ಅರ್ಜಿ

Published on

ಮಂಡ್ಯ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ 2013-14ನೇ ಸಾಲಿನ ಆಧುನಿಕ ಹೈನುಗಾರಿಕೆ ಅನುಸರಿಸಲು ರೈತರಿಗೆ ಸಹಾಯ ಯೋಜನೆ ಅನುಷ್ಠಾನಗೊಳಿಸಲು ಇಬ್ಬರು ಅರ್ಹ ಫಲಾನುಭವಿಗಳ ಆಯ್ಕೆ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫಲಾನುಭವಿಯು ಕನಿಷ್ಠ 5 ರಾಸು ಹೊಂದಿರಬೇಕು ಹಾಗೂ ಕೊಟ್ಟಿಗೆ ನಿರ್ಮಾಣಕ್ಕೆ ಸೂಕ್ತ ಜಾಗ ಲಭ್ಯತೆ ಇರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರಿಗೆ, ಅಂಗವಿಕಲರಿಗೆ ಇತರರಿಗೆ ನಿಯಮಾನುಸಾರ ಆದ್ಯತೆ ನೀಡಲಾಗುವುದು. ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com