ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಸಾಮಾನ್ಯವಾಗಿ ಒಂದು ವಿದ್ಯುನ್ಮಾನ ಮತಯಂತ್ರದಲ್ಲಿ (ಇವಿಎಂ) 15 ಅಭ್ಯರ್ಥಿಗಳ ಹೆಸರಿರುತ್ತದೆ. ಆದರೆ, ಈ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ 15ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳಿರುವುದರಿಂದ 2 ಇವಿಎಂಗಳನ್ನು ಬಳಸಲಾಗುತ್ತಿದೆ. ಇದರಿಂದ ಮತಯಂತ್ರಗಳ ಕೊರತೆ ಎದುರಾಗಿದ್ದು, ಹಾಸನ, ಕೊಪ್ಪಳ ಸೇರಿ ಇತರ ಜಿಲ್ಲೆಗಳಲ್ಲಿ ಹೆಚ್ಚುವರಿ ಬ್ಯಾಲೆಟ್ಗಳನ್ನು ತರಿಸಲಾಗುತ್ತಿದೆ ಎಂದರು.