ಸುಮಾಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿಖಿಲ್, ಸುಮಾಲತಾ ಅವರಿಗೆ ಒಳ್ಳೆಯದಾಗಲಿ. ಮಂಡ್ಯ ಜಲ್ಲೆಯ ಜನತೆ ಹಾಗೂ ಕುಮಾರಸ್ವಾಮಿ ಅವರ ನಂಟು ಹೇಗಿದೆ ಎಲ್ಲರಿಗೂ ತಿಳಿದ ವಿಚಾರ. ಕುಮಾರಸ್ವಾಮಿ ಅವರ ಮೇಲೆ ಮಂಡ್ಯದ ಜನ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಜಿಲ್ಲೆಯ ಜನತೆಯ ವಿಶ್ವಾಸವನ್ನು ತಾವೂ ಗಳಿಸುವ ಪ್ರಯತ್ನ ನಡೆಸುತ್ತಿರುವುದಾಗಿ ನಿಖಿಲ್ ತಿಳಿಸಿದರು.