ಫಲಿತಾಂಶ ಪ್ರಕಟವಾಗುವ ಮುನ್ನವೇ ನಿಖಿಲ್ ಸಂಸದ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಣೆ

ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್​ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್​ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್ ಅಭಿಮಾನಿಯ "ಲಗ್ನಪತ್ರಿಕೆ" ಈ ಎಡವಟ್ಟು ಬೆಳಕಿಗೆ ಬಂದಿದೆ. 
ಶ್ರೀರಂಗಪಟ್ಟಣದ ಟಿಎಪಿಎಸಿ ಕಲ್ಯಾಣ ಮಂಟಪದಲ್ಲಿ ಮೇಳಾಪುರದ ಎಂ.ಎನ್​.ಅಶೋಕ್​ಕುಮಾರ್​ ಹಾಗೂ ಅಭಿಲಾಷ ಅವರ ಮದುವೆ ಜೂ.6ರಂದು ನಡೆಯಲಿದೆ. ವಿವಾಹ ಆಹ್ವಾನ ಪತ್ರಿಕೆಯ ಒಂದು ಪುಟದಲ್ಲಿ ನಿಖಿಲ್​ ಕುಮಾರ ಸ್ವಾಮಿ ಫೋಟೋ ಹಾಕಿ ಕೆಳಭಾಗದಲ್ಲಿ ವಿಶೇಷ ಆಹ್ವಾನಿತರು ಜೆಡಿಎಸ್​ ಯುವ ಸಾರಥಿ, ನಿಖಿಲ್​ ಕುಮಾರಸ್ವಾಮಿ, ಮಂಡ್ಯ, ಸಂಸದರು ಎಂದು ಮುದ್ರಿಸಲಾಗಿದೆ...!
ವಿವಾಹ ಆಹ್ವಾನ ಪತ್ರಿಕೆ ಎಲ್ಲಡೆ ಭಾರಿ ವೈರಲ್ ಆಗಿದ್ದು ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ.. ನಿಖಿಲ್ ಕುಮಾರಸ್ವಾಮಿಗೆ ಸಂಸದ ಸ್ಥಾನವನ್ನು ನೀಡುವ ಮೂಲಕ ಬೆಂಬಲಿಗರು ಅಭಿಮಾನ ಮೆರೆದಿದ್ದಾರೆ..!
ಈ ಹಿಂದೆ ನಿಖಿಲ್​ ಅವರ ಅಭಿಮಾನಿಯೊಬ್ಬ ಚುನಾವಣೆ ಮುಗಿಯುತ್ತಿದ್ದಂತೆ ನಿಖಿಲ್ ​ಅವರನ್ನು ಸಂಸದರು ಎಂದು ನಮೂದಿಸಿದ ನಾಮಫಲಕವನ್ನು ತಮ್ಮ ಫೇಸ್​ಬುಕ್​ನಲ್ಲಿ ಶೇರ್​ ಮಾಡಿಕೊಂಡಿದ್ದರು. ಹಾಗೇ ಜೆಡಿಎಸ್​ ಅಂದಾಭಿಮಾನಿಯೊಬ್ಬ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಜ್ವಲ್ ರೇವಣ್ಣನವರ ಹೆಸರು ಹಾಕಿ, ಅದರ ಮುಂದೆ ಲೋಕಸಭಾ ಸಂಸದರು ಎಂದು ನಮೂದಿಸಿದ್ದ ಫೋಟೋ ಸಹ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿತ್ತು.
ಅಭಿಮಾನಿಗಳ ಈ ಹುಚ್ಚು ಅಭಿಮಾನ, ನಾಯಕರನ್ನು ಸಂತೋಷಗೊಳಿಸುತ್ತದೆ. ಆದರೆ ರಾಜಕೀಯ ನಾಯಕರು ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ತೀವ್ರ ಟೀಕೆಗೆ ಒಳಗಾಗಿ ಪೇಚಿಗೆ ಸಿಲುಕುವಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com