ಪ್ರಧಾನಿ ನರೇಂದ್ರ ಮೋದಿ
ದೇಶ
ವೈಮಾನಿಕ ದಾಳಿಯ ಹಿರೋಗಳಿಗೆ ಮತ ನೀಡಿ ಹೇಳಿಕೆ: ಪ್ರಧಾನಿ ನರೇಂದ್ರ ಮೋದಿಗೆ ಸಂಕಷ್ಟ?
ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ದಾಳಿಯ ಹಿರೋಗಳಿಗೆ ಮತ ನೀಡಿ ಎಂದು ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಸಮೂಹಕ್ಕೆ ಕರೆ
ನವದೆಹಲಿ: ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ದಾಳಿಯ ಹಿರೋಗಳಿಗೆ ಮತ ನೀಡಿ ಎಂದು ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಸಮೂಹಕ್ಕೆ ಕರೆ ನೀಡಿದ್ದರು. ಈಗ ಈ ಹೇಳಿಕೆಯೇ ಪ್ರಧಾನಿ ನರೇಂದ್ರ ಮೋದಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಸೇನಾ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮೋದಿ ನೀಡಿದ ಹೇಳಿಕೆಗಳ ವಿರುದ್ಧ ಕಮ್ಯುನಿಸ್ಟ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದೆ.
ದೂರನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಮೋದಿ ಹೇಳಿಕೆಯ ಕುರಿತು ವರದಿ ನೀಡುವಂತೆ ಮಹಾರಾಷ್ಟ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ