ಅಮರಾವತಿ:ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ ಶೇ . 80ರ ಸನ್ನಿಹಕ್ಕೆ ತಲುಪಿದೆ.
ಕೆಲವು ಕಡೆಗಳಲ್ಲಿ ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಡುವಿನ ಘರ್ಷಣೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿತ್ತು.
ಗುಂಟೂರು, ಕೃಷ್ಣಾ, ನೆಲ್ಲೂರು ಮತ್ತು ಕರ್ನೂಲು ಜಿಲ್ಲೆಗಳಲ್ಲಿ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನ ನಡೆದಿದೆ. ಸಂಜೆ 6 ಗಂಟೆಯಿಂದಲೂ ಸರತಿ ಸಾಲಿನಲ್ಲಿ ನಿಂತಿದ್ದ ಎಲ್ಲರಿಗೂ ಮತದಾನ ಮಾಡಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು.
Advertisement