ಚುನಾವಣಾ ಪ್ರಚಾರವನ್ನುದ್ದೇಶಿಸಿ ಮಾತನಾಡಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಲಿ (ಮುಸ್ಲಿಂ ಸಮುದಾಯದ ಮತಗಳು) ಬಿಎಸ್ ಪಿ-ಸಮಾಜವಾದಿ ಪಕ್ಷ- ಆರ್ ಎಲ್ ಡಿ ಜೊತೆ ಇದ್ದರೆ, ಬಜರಂಗಬಲಿ (ಹಿಂದೂ ಸಮುದಾಯದ ಮತಗಳು) ಭಾರತೀಯ ಜನತಾ ಪಕ್ಷದೊಂದಿಗೆ ಇದೆ ಎಂದು ಹೇಳಿದ್ದರು. ಈಗ ಈ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಮಾಯಾವತಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬಜರಂಗ ಬಲಿ, ಅಲಿ ಇಬ್ಬರೂ ನಮ್ಮವರೇ ಇಬ್ಬರೂ ಬಿಜೆಪಿಗೆ ಮತ ನೀಡುವುದಿಲ್ಲ ಎಂದು ಹೇಳಿದ್ದಾರೆ.