ಬೆಂಗಳೂರು ದಕ್ಷಿಣ ಕ್ಷೇತ್ರದ ಜಯನಗರ ಮತಗಟ್ಟೆ ಸಂಖ್ಯೆ 54ರಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಹಕ್ಕು ಚಲಾಯಿಸಿದರು. ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ರಜನಿಕಾಂತ್ ಚೆನ್ನೈಯ ಸ್ಟೆಲ್ಲಾ ಮ್ಯಾರಿಸ್ ಕಾಲೇಜಿನಲ್ಲಿ ತಮ್ಮ ಹಕ್ಕು ಚಲಾಯಿಸಿದರೆ, ಕಮಲ್ ಹಾಸನ್ ಚೆನ್ನೈಯ ಅಲ್ವರ್ ಪೇಟೆ ಕಾರ್ಪೊರೇಶನ್ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ ಚಿದಂಬರಂ ಶಿವಗಂಗಾದಲ್ಲಿ ವೋಟಿಂಗ್ ಮಾಡಿದರು.