ನರೇಂದ್ರ ಮೋದಿಯವರು 15-20 ಲಕ್ಷ ರೂಪಾಯಿಯನ್ನು ದೇಶದ ಬಡವರ ಖಾತೆಗೆ ಹಾಕುವುದಾಗಿ ಹೇಳಿದ್ದರು. ಇಂದಿಗೂ ಆ ಯುಟ್ಯೂಬ್ ವಿಡಿಯೋ ನನ್ನ ಬಳಿ ಇದೆ. ಬಡವರು ಅವರನ್ನು ನಂಬಿ ಮತಹಾಕಿದರು. ಆದರೆ ಮೋದಿ ಸುಳ್ಳು ಹೇಳಿದರು. ಭರವಸೆಯನ್ನು ಈಡೇರಿಸಲಿಲ್ಲ. ನನ್ನ ದೃಷ್ಟಿಕೋನ, ವಿಚಾರಧಾರೆಗಳು, ಯೋಚಿಸುವ ವಿಧಾನಗಳೆಲ್ಲ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳೊಂದಿಗೆ ಹೊಂದಿಕೆಯಾಗುತ್ತವೆ. ಕಾಂಗ್ರೆಸ್ ಜನರನ್ನು ಶಿಕ್ಷಿತರನ್ನಾಗಿ ಮಾಡುತ್ತಿದೆ. ಒಳ್ಳೆ ಮುಖಂಡರನ್ನು ಹೊಂದಿದೆ. ಅವರು ಭವಿಷ್ಯದ ಬಗ್ಗೆ ಯೋಚಿಸುತ್ತಾರೆ. ಒಳ್ಳೊಳ್ಳೆ ಸಂಗತಿಗಳ ಬಗ್ಗೆ ಮಾತನಾಡುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದೆ ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.