ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ನಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಎಂಜಿನ್ ದೋಷ ಕಂಡು ಬಂದಿದ್ದು. ಅನಿವಾರ್ಯವಾಗಿ ವಿಮಾನ ದೆಹಲಿಗೆ ವಾಪಸ್ ಆಗಿದೆ. ಹೀಗಾಗಿ ಬಿಹಾರದ ಸಮಸ್ತಿಪುರ, ಒರಿಸ್ಸಾದ ಬಾಲಾಸೋರ್ ಮತ್ತು ಮಹಾರಾಷ್ಟ್ರದ ಸಂಗಮ್ನರ್ ನಲ್ಲಿ ನಡೆಯಬೇಕಿದ್ದ ಪ್ರಚಾರ ಕಾರ್ಯ ತಡವಾಗಲಿದೆ. ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.